ರೈತನ ಡೈರಿ

ಸುಸ್ಥಿರ ಕೃಷಿ ಮಾರ್ಗ

ಶ್ರೀ ಮಲ್ಲಿಕಾರ್ಜುನ ಪಾಟೀಲರು ಕರ್ನಾಟಕದ ಧಾರವಾಡ ಜಿಲ್ಲೆಯ ಕಲ್ಲಘಟ್ಟಿ ತಾಲ್ಲೂಕಿನ ಮುಕ್ಕಾಲು ಹಳ್ಳಿಗೆ ಸೇರಿದವರು. ದೇಶದ ಬಹುತೇಕ ರೈತರು ಕೃಷಿಯಲ್ಲಿ ಆದಾಯವಿಲ್ಲ ಎಂದು ಅದನ್ನು ತೊರೆಯುತ್ತಿರುವಾಗ ಪಾಟೀಲರು ಇವರ ನಡುವೆ ವಿಭಿನ್ನರಾಗಿ ನಿಲ್ಲುತ್ತಾರೆ. ಕೃಷಿಯಿಂದ ಸುಸ್ಥಿರ ಆದಾಯವನ್ನು ಗಳಿಸಬಹುದು ಎಂದು ಸಾಧಿಸಿ ತೋರಿಸಿ ಯುವಜನಾಂಗವು ಕೃಷಿಯಲ್ಲಿ ತೊಡಗಿಕೊಳ್ಳುವುದಕ್ಕೆ ಮಾದರಿಯಾಗಿದ್ದಾರೆ. ಸುಸ್ಥಿರವಾದ ನೈಸರ್ಗಿಕ ಕೃಷಿ ವಿಧಾನಗಳನ್ನು ಅಳವಡಿಸಿಕೊಂಡು ರಾಸಾಯನಿಕಗಳನ್ನು ಬಳಸದೆ ಮಲ್ಲಿಕಾರ್ಜುನ ಪಾಟೀಲರು ಮಣ್ಣಿನ ಆರೋಗ್ಯವನ್ನು ಕಾಪಾಡಿಕೊಂಡು ಉತ್ತಮ ಇಳುವರಿಯನ್ನು ಪಡೆಯುತ್ತಿದ್ದಾರೆ.

ಶ್ರೀ ಪಾಟೀಲರು ಸಜ್ಜೆ, ರಾಗಿ ಮತ್ತು ನವಣೆಯನ್ನು ಬೆಳೆಯುತ್ತಿದ್ದಾರೆ. ಇದರೊಂದಿಗೆ ಉದ್ದು, ಅಲಸಂದೆ, ಸೋಯಾಬೀನ್‌ ಇತ್ಯಾದಿಗಳನ್ನು ಬೆಳೆಯುತ್ತಿದ್ದಾರೆ. ಇಂದಿಗೂ ಇವುಗಳ ಬೀಜವನ್ನು ಕೇಳಿದ ರೈತರಿಗೆ ಒದಗಿಸುತ್ತಿದ್ದಾರೆ. ಅವರ ಬಳಿ ಮೂರು ಹಸುಗಳಿವೆ. ಹತ್ತು ಗುಂಟೆ ಭೂಮಿಯಲ್ಲಿ ಇವುಗಳಿಗಾಗಿ ಮೇವನ್ನು ಬೆಳೆಯುತ್ತಿದ್ದಾಋಎ. ಪ್ರತಿವಾರ ಸುಮಾರು ೨೨೫ ಲೀಟರ್‌ನಷ್ಟು ಹಾಲನ್ನು ಮಾರಾಟ ಮಾಡುತ್ತಿದ್ದಾರೆ.

ಇದರೊಂದಿಗೆ ಹಿತ್ತಲಲ್ಲಿ ಗಿರಿರಾಜ ಕೋಳಿ ಮತ್ತು ದೇಸಿ ಕೋಳಿಗಳ ಸಾಕಾಣಿಕೆ ಮಾಡುತ್ತಿದ್ದಾರೆ. ಇವುಗಳಿಂದ ಮಾಸಿಕ ರೂ.೫,೦೦೦ ಗಳಿಸುತ್ತಿದ್ದಾರೆ.

ಪ್ರತಿ ಹೆಕ್ಟೇರಿಗೆ ೨೪ ಕ್ವಿಂಟಾಲ್‌ ಜೋಳವನ್ನು ಬೆಳೆಯುವ ಮೂಲಕ ತಾಲ್ಲೂಕಿನಲ್ಲಿ ಅತಿಹೆಚ್ಚು ಜೋಳ ಬೆಳೆದ ದಾಖಲೆಯನ್ನು ಮಾಡಿದ್ದಾರೆ. ಅದೇ ರೀತಿ ಒಂದು ಎಕರೆಗೆ ೩೮ ಕ್ವಿಂಟಾಲ್‌ ಭತ್ತ ಬೆಳೆದು ದಾಖಲೆ ನಿರ್ಮಿಸಿದ್ದಾರೆ.

ಶ್ರೀ ಮಲ್ಲಿಕಾರ್ಜುನ ಪಾಟೀಲರು ತಮ್ಮ ಶ್ರಮಕ್ಕೆ ಹಲವು ಪುರಸ್ಕಾರಗಳನ್ನು ಪಡೆದಿದ್ದಾರೆ. ೨೦೧೪-೧೫ರಲ್ಲಿ ತಾಲ್ಲೂಕು ಮಟ್ಟದಲ್ಲಿ ಅತ್ಯುತ್ತಮ ಕೃಷಿಕ ಪ್ರಶಸ್ತಿ ಪಡೆದಿದ್ದಾರೆ. ೨೦೧೭ರಲ್ಲಿ ಶ್ರೀ ಸಿದ್ಧರೂಢ ರಾಜ್ಯ ಪ್ರಶಸ್ತಿ ಪಡೆದವರಲ್ಲಿ ಇವರು ಕೂಡ ಸೇರಿದ್ದಾರೆ.

ಶ್ರೀ ಪಾಟೀಲರು ಕುಟುಂಬವು ಮಣ್ಣನ್ನು ನಂಬಿ ಹಾಳಾದವರಿಲ್ಲ ಎಂಬ ಬಗ್ಗೆ ಅಚಲವಿಶ್ವಾಸವನ್ನು ಹೊಂದಿದ್ದಾರೆ. ಕೃಷಿಯ ಬಗೆಗಿನ ಅವರ ಈ ನಂಬಿಕೆಗೆ ಸಾಕ್ಷಿಯಾಗಿ ಅವರ ಮಕ್ಕಳಿಬ್ಬರೂ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಶ್ರೀ ಪಾಟೀಲರು ತಮ್ಮೆಲ್ಲ ಯಶಸ್ಸಿನ ಶ್ರೇಯ ತಮ್ಮೊಂದಿಗೆ ಈ ಪಯಣದಲ್ಲಿ ಜೊತೆಯಾಗಿ ನಿಂತಿರುವ ತಮ್ಮ ಪತ್ನಿಗೆ ಸಲ್ಲಬೇಕೆಂದು ಹೇಳುತ್ತಾರೆ.

ಆಂಗ್ಲ ಮೂಲ : ಲೀಸಾ ಇಂಡಿಯಾ; ಸಂಪುಟ :೨೧; ಸಂಚಿಕೆ : ‌೩ ; ಸೆಪ್ಟಂಬರ್ ೨೦೧೯

Recent Posts

ಮೀನು ಸಾಕಣೆದಾರರ ಸಬಲೀಕರಣ ಜೀವನೋಪಾಯದ ಹೆಚ್ಚಳ

ಮೀನು ಸಾಕಣೆದಾರರ ಸಬಲೀಕರಣ ಜೀವನೋಪಾಯದ ಹೆಚ್ಚಳ

ಸುಸ್ಥಿರ ಜಲಚರ ಸಾಕಣೆಯು ಪರಿಸರ ಸಮತೋಲನವನ್ನು ಖಚಿತಪಡಿಸುವ, ಪರಿಸರ ಸಂರಕ್ಷಣೆಯನ್ನು ಬಲಪಡಿಸುವ ಮತ್ತು ಸಮುದಾಯ-ಚಾಲಿತ ಸುಸ್ಥಿರ ಕೃಷಿ ಪರಿವರ್ತನೆಯನ್ನು ತರಬಲ್ಲ ಅಭ್ಯಾಸಗಳನ್ನು ಒಳಗೊಂಡಿದೆ. ಸುಸ್ಥಿರ ಜಲಚರ ಸಾಕಣೆಯನ್ನು ತನ್ನ ಪ್ರಮುಖ ಉಪಕ್ರಮವಾಗಿ ಹೊಂದಿರುವ SAFAL, ಅಸ್ಸಾಂ ಮತ್ತು ಒರಿಸ್ಸಾದಲ್ಲಿ 7000 ಮೀನು ಸಾಕಣೆದಾರರ ಜೀವನೋಪಾಯವನ್ನು ಹೆಚ್ಚಿಸಿ ಸಬಲರನ್ನಾಗಿಸಿದೆ.

ಗ್ರಾಮೀಣ ಸಮುದಾಯಗಳಲ್ಲಿ ನಾವೀನ್ಯತೆ ಅಳವಡಿಕೆ ಸಾಮರ್ಥ್ಯವನ್ನು ನಿರ್ಮಿಸುವುದು

ಗ್ರಾಮೀಣ ಸಮುದಾಯಗಳಲ್ಲಿ ನಾವೀನ್ಯತೆ ಅಳವಡಿಕೆ ಸಾಮರ್ಥ್ಯವನ್ನು ನಿರ್ಮಿಸುವುದು

ಸಣ್ಣ ಹಿಡುವಳಿದಾರರಿಗೆ ಸುಸ್ಥಿರ ಯಾಂತ್ರೀಕರಣ ಎನ್ನುವುದು ಕೇವಲ ಯಂತ್ರಗಳ ಬಗ್ಗೆ ಅಲ್ಲ – ಇದು ಸ್ಥಳೀಯ ಸಾಮರ್ಥ್ಯ, ಉದ್ಯಮ ಮತ್ತು ವಿಶ್ವಾಸವನ್ನು ನಿರ್ಮಿಸುವ ಕುರಿತಾದದ್ದು. ಇನ್ನೋವೇಶನ್ ಗಿಲ್ಡ್‌ನ ಪರಿಸರ ವ್ಯವಸ್ಥೆಯ ಮಾದರಿಯು ಸೂಕ್ತ ಪಾಲುದಾರಿಕೆಗಳೊಂದಿಗೆ, ತಂತ್ರಜ್ಞಾನವು ಗ್ರಾಮೀಣ ಭಾರತದಲ್ಲಿ ನಿಜವಾಗಿಯೂ ಬೇರೂರಬಹುದು ಎಂದು ತೋರಿಸುತ್ತದೆ.

ಸ್ಥಿತಿಸ್ಥಾಪಕತ್ವದ ಹೆಚ್ಚಳ

ಸ್ಥಿತಿಸ್ಥಾಪಕತ್ವದ ಹೆಚ್ಚಳ

ಇಡುಕ್ಕಿ ಜಿಲ್ಲೆಯು ಪುನರುತ್ಪಾದಕ ಸಾವಯವ ಪದ್ಧತಿಗಳ ತತ್ವಗಳ ಆಧಾರದ ಮೇಲೆ ಕೃಷಿ ಪದ್ಧತಿಗಳನ್ನು ಅನುಸರಿಸುವ ಮೂಲಕ ಬದಲಾಗುತ್ತಿರುವ ಹವಾಮಾನದ ಪರಿಣಾಮಗಳನ್ನು ತಗ್ಗಿಸಲು ಮತ್ತು ಹೊಂದಿಕೊಳ್ಳಲು ಸಮರ್ಥವಾಗಿದೆ. ಪೀರ್‌ಮೇಡ್ ಡೆವಲಪ್‌ಮೆಂಟ್ ಸೊಸೈಟಿ ಎನ್‌ಜಿಒ ಆಗಿದ್ದು, ಕೃಷಿ ಪರಿಸರ ಪದ್ಧತಿಗಳನ್ನು ಉತ್ತೇಜಿಸುವ ಮೂಲಕ ಈ ರೈತರಿಗೆ ಕೃಷಿ ಸುಸ್ಥಿರತೆಯನ್ನು ನಿರ್ಮಿಸಲು ಸಹಾಯ ಮಾಡುತ್ತಿದೆ.