ರೈತನ ಡೈರಿ

ಸುಸ್ಥಿರ ಕೃಷಿ ಮಾರ್ಗ

ಶ್ರೀ ಮಲ್ಲಿಕಾರ್ಜುನ ಪಾಟೀಲರು ಕರ್ನಾಟಕದ ಧಾರವಾಡ ಜಿಲ್ಲೆಯ ಕಲ್ಲಘಟ್ಟಿ ತಾಲ್ಲೂಕಿನ ಮುಕ್ಕಾಲು ಹಳ್ಳಿಗೆ ಸೇರಿದವರು. ದೇಶದ ಬಹುತೇಕ ರೈತರು ಕೃಷಿಯಲ್ಲಿ ಆದಾಯವಿಲ್ಲ ಎಂದು ಅದನ್ನು ತೊರೆಯುತ್ತಿರುವಾಗ ಪಾಟೀಲರು ಇವರ ನಡುವೆ ವಿಭಿನ್ನರಾಗಿ ನಿಲ್ಲುತ್ತಾರೆ. ಕೃಷಿಯಿಂದ ಸುಸ್ಥಿರ ಆದಾಯವನ್ನು ಗಳಿಸಬಹುದು ಎಂದು ಸಾಧಿಸಿ ತೋರಿಸಿ ಯುವಜನಾಂಗವು ಕೃಷಿಯಲ್ಲಿ ತೊಡಗಿಕೊಳ್ಳುವುದಕ್ಕೆ ಮಾದರಿಯಾಗಿದ್ದಾರೆ. ಸುಸ್ಥಿರವಾದ ನೈಸರ್ಗಿಕ ಕೃಷಿ ವಿಧಾನಗಳನ್ನು ಅಳವಡಿಸಿಕೊಂಡು ರಾಸಾಯನಿಕಗಳನ್ನು ಬಳಸದೆ ಮಲ್ಲಿಕಾರ್ಜುನ ಪಾಟೀಲರು ಮಣ್ಣಿನ ಆರೋಗ್ಯವನ್ನು ಕಾಪಾಡಿಕೊಂಡು ಉತ್ತಮ ಇಳುವರಿಯನ್ನು ಪಡೆಯುತ್ತಿದ್ದಾರೆ.

ಶ್ರೀ ಪಾಟೀಲರು ಸಜ್ಜೆ, ರಾಗಿ ಮತ್ತು ನವಣೆಯನ್ನು ಬೆಳೆಯುತ್ತಿದ್ದಾರೆ. ಇದರೊಂದಿಗೆ ಉದ್ದು, ಅಲಸಂದೆ, ಸೋಯಾಬೀನ್‌ ಇತ್ಯಾದಿಗಳನ್ನು ಬೆಳೆಯುತ್ತಿದ್ದಾರೆ. ಇಂದಿಗೂ ಇವುಗಳ ಬೀಜವನ್ನು ಕೇಳಿದ ರೈತರಿಗೆ ಒದಗಿಸುತ್ತಿದ್ದಾರೆ. ಅವರ ಬಳಿ ಮೂರು ಹಸುಗಳಿವೆ. ಹತ್ತು ಗುಂಟೆ ಭೂಮಿಯಲ್ಲಿ ಇವುಗಳಿಗಾಗಿ ಮೇವನ್ನು ಬೆಳೆಯುತ್ತಿದ್ದಾಋಎ. ಪ್ರತಿವಾರ ಸುಮಾರು ೨೨೫ ಲೀಟರ್‌ನಷ್ಟು ಹಾಲನ್ನು ಮಾರಾಟ ಮಾಡುತ್ತಿದ್ದಾರೆ.

ಇದರೊಂದಿಗೆ ಹಿತ್ತಲಲ್ಲಿ ಗಿರಿರಾಜ ಕೋಳಿ ಮತ್ತು ದೇಸಿ ಕೋಳಿಗಳ ಸಾಕಾಣಿಕೆ ಮಾಡುತ್ತಿದ್ದಾರೆ. ಇವುಗಳಿಂದ ಮಾಸಿಕ ರೂ.೫,೦೦೦ ಗಳಿಸುತ್ತಿದ್ದಾರೆ.

ಪ್ರತಿ ಹೆಕ್ಟೇರಿಗೆ ೨೪ ಕ್ವಿಂಟಾಲ್‌ ಜೋಳವನ್ನು ಬೆಳೆಯುವ ಮೂಲಕ ತಾಲ್ಲೂಕಿನಲ್ಲಿ ಅತಿಹೆಚ್ಚು ಜೋಳ ಬೆಳೆದ ದಾಖಲೆಯನ್ನು ಮಾಡಿದ್ದಾರೆ. ಅದೇ ರೀತಿ ಒಂದು ಎಕರೆಗೆ ೩೮ ಕ್ವಿಂಟಾಲ್‌ ಭತ್ತ ಬೆಳೆದು ದಾಖಲೆ ನಿರ್ಮಿಸಿದ್ದಾರೆ.

ಶ್ರೀ ಮಲ್ಲಿಕಾರ್ಜುನ ಪಾಟೀಲರು ತಮ್ಮ ಶ್ರಮಕ್ಕೆ ಹಲವು ಪುರಸ್ಕಾರಗಳನ್ನು ಪಡೆದಿದ್ದಾರೆ. ೨೦೧೪-೧೫ರಲ್ಲಿ ತಾಲ್ಲೂಕು ಮಟ್ಟದಲ್ಲಿ ಅತ್ಯುತ್ತಮ ಕೃಷಿಕ ಪ್ರಶಸ್ತಿ ಪಡೆದಿದ್ದಾರೆ. ೨೦೧೭ರಲ್ಲಿ ಶ್ರೀ ಸಿದ್ಧರೂಢ ರಾಜ್ಯ ಪ್ರಶಸ್ತಿ ಪಡೆದವರಲ್ಲಿ ಇವರು ಕೂಡ ಸೇರಿದ್ದಾರೆ.

ಶ್ರೀ ಪಾಟೀಲರು ಕುಟುಂಬವು ಮಣ್ಣನ್ನು ನಂಬಿ ಹಾಳಾದವರಿಲ್ಲ ಎಂಬ ಬಗ್ಗೆ ಅಚಲವಿಶ್ವಾಸವನ್ನು ಹೊಂದಿದ್ದಾರೆ. ಕೃಷಿಯ ಬಗೆಗಿನ ಅವರ ಈ ನಂಬಿಕೆಗೆ ಸಾಕ್ಷಿಯಾಗಿ ಅವರ ಮಕ್ಕಳಿಬ್ಬರೂ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಶ್ರೀ ಪಾಟೀಲರು ತಮ್ಮೆಲ್ಲ ಯಶಸ್ಸಿನ ಶ್ರೇಯ ತಮ್ಮೊಂದಿಗೆ ಈ ಪಯಣದಲ್ಲಿ ಜೊತೆಯಾಗಿ ನಿಂತಿರುವ ತಮ್ಮ ಪತ್ನಿಗೆ ಸಲ್ಲಬೇಕೆಂದು ಹೇಳುತ್ತಾರೆ.

ಆಂಗ್ಲ ಮೂಲ : ಲೀಸಾ ಇಂಡಿಯಾ; ಸಂಪುಟ :೨೧; ಸಂಚಿಕೆ : ‌೩ ; ಸೆಪ್ಟಂಬರ್ ೨೦೧೯

Recent Posts

ಸುಸ್ಥಿರ ಮತ್ತು ಸಮಗ್ರ ಕೃಷಿ ಯಾಂತ್ರೀಕರಣ

ಸುಸ್ಥಿರ ಮತ್ತು ಸಮಗ್ರ ಕೃಷಿ ಯಾಂತ್ರೀಕರಣ

ಸಣ್ಣ ರೈತರಿಗೆ ದುಬಾರಿ ವೆಚ್ಚದ ಕಾರಣದಿಂದಾಗಿ ಕೃಷಿ ಯಂತ್ರಗಳ ಲಭ್ಯತೆ ಸೀಮಿತವಾಗಿರುತ್ತದೆ. ಆದ್ದರಿಂದ ಪರಿಸರ, ಸಾಮಾಜಿಕ ಮತ್ತು ಆರ್ಥಿಕ ಸಮತೋಲನವನ್ನು ಖಾತ್ರಿಪಡಿಸಿಕೊಳ್ಳುವಾಗ ಉತ್ಪಾದಕತೆಯನ್ನು ಹೆಚ್ಚಿಸುವ ಸುಸ್ಥಿರ ಯಾಂತ್ರೀಕರಣ ಮಾದರಿ ಅಗತ್ಯ. ಮಹಾಶಕ್ತಿ ಪ್ರತಿಷ್ಠಾನದ ಸುಸ್ಥಿರ ಕೃಷಿ ಯಾಂತ್ರೀಕರಣ ಉಪಕ್ರಮವು ಶ್ರಮವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೃಷಿ ಯಂತ್ರೋಪಕರಣಗಳನ್ನು ಒದಗಿಸುವಲ್ಲಿ ಯಶಸ್ವಿಯಾಗಿದೆ.

ಬದಲಾವಣೆಯ ಬೀಜಗಳ ಬಿತ್ತನೆ

ಬದಲಾವಣೆಯ ಬೀಜಗಳ ಬಿತ್ತನೆ

ಮಿಶ್ರ ಬೆಳೆ, ದೇಸಿ ಬೀಜಗಳು ಮತ್ತು ಸಮುದಾಯ ನೇತೃತ್ವದ ಕೃಷಿ ಪರಿಸರ ವಿಜ್ಞಾನವು ಸುಸ್ಥಿರ ಭವಿಷ್ಯದ ಕೀಲಿಕೈ ಆಗಿದೆ. ಅನಂತ್‌ ಅವರ ಪ್ರಯಾಣವು ಅಂತಹ ಒಂದು ಉದಾಹರಣೆಯಾಗಿದೆ.

ಬೋಡಿ ಆಧಾರಿತ ಸಮಗ್ರ ಕೃಷಿ ವ್ಯವಸ್ಥೆ- ಬುಡಕಟ್ಟು ಕುಟುಂಬಗಳಿಗೆ ವರದಾನ

ಬೋಡಿ ಆಧಾರಿತ ಸಮಗ್ರ ಕೃಷಿ ವ್ಯವಸ್ಥೆ- ಬುಡಕಟ್ಟು ಕುಟುಂಬಗಳಿಗೆ ವರದಾನ

ಮಹಾರಾಷ್ಟ್ರದಲ್ಲಿ ಜಾರಿಗೆ ತರಲಾದ ಬೋಡಿ ಆಧಾರಿತ ಸಮಗ್ರ ಕೃಷಿ ವ್ಯವಸ್ಥೆಯು ಸಣ್ಣ ರೈತರ ಜೀವನೋಪಾಯವನ್ನು ಹೆಚ್ಚಿಸಿದೆ. ಅದರ ವಿವಿಧ ಸಂಯೋಜಿತ ಘಟಕಗಳ ಮೂಲಕ, ಈ ಮಾದರಿಯು ಆದಾಯ, ಕುಟುಂಬದ ಪೋಷಣೆ, ಕೃಷಿ ಸ್ಥಿತಿಸ್ಥಾಪಕತ್ವ ಮತ್ತು ಸುಸ್ಥಿರತೆಯನ್ನು ಹೆಚ್ಚಿಸುತ್ತದೆ ಎನ್ನುವುದು ಸಾಬೀತಾಗಿದೆ.