ರೈತನ ಡೈರಿ

ಸುಸ್ಥಿರ ಕೃಷಿ ಮಾರ್ಗ

ಶ್ರೀ ಮಲ್ಲಿಕಾರ್ಜುನ ಪಾಟೀಲರು ಕರ್ನಾಟಕದ ಧಾರವಾಡ ಜಿಲ್ಲೆಯ ಕಲ್ಲಘಟ್ಟಿ ತಾಲ್ಲೂಕಿನ ಮುಕ್ಕಾಲು ಹಳ್ಳಿಗೆ ಸೇರಿದವರು. ದೇಶದ ಬಹುತೇಕ ರೈತರು ಕೃಷಿಯಲ್ಲಿ ಆದಾಯವಿಲ್ಲ ಎಂದು ಅದನ್ನು ತೊರೆಯುತ್ತಿರುವಾಗ ಪಾಟೀಲರು ಇವರ ನಡುವೆ ವಿಭಿನ್ನರಾಗಿ ನಿಲ್ಲುತ್ತಾರೆ. ಕೃಷಿಯಿಂದ ಸುಸ್ಥಿರ ಆದಾಯವನ್ನು ಗಳಿಸಬಹುದು ಎಂದು ಸಾಧಿಸಿ ತೋರಿಸಿ ಯುವಜನಾಂಗವು ಕೃಷಿಯಲ್ಲಿ ತೊಡಗಿಕೊಳ್ಳುವುದಕ್ಕೆ ಮಾದರಿಯಾಗಿದ್ದಾರೆ. ಸುಸ್ಥಿರವಾದ ನೈಸರ್ಗಿಕ ಕೃಷಿ ವಿಧಾನಗಳನ್ನು ಅಳವಡಿಸಿಕೊಂಡು ರಾಸಾಯನಿಕಗಳನ್ನು ಬಳಸದೆ ಮಲ್ಲಿಕಾರ್ಜುನ ಪಾಟೀಲರು ಮಣ್ಣಿನ ಆರೋಗ್ಯವನ್ನು ಕಾಪಾಡಿಕೊಂಡು ಉತ್ತಮ ಇಳುವರಿಯನ್ನು ಪಡೆಯುತ್ತಿದ್ದಾರೆ.

ಶ್ರೀ ಪಾಟೀಲರು ಸಜ್ಜೆ, ರಾಗಿ ಮತ್ತು ನವಣೆಯನ್ನು ಬೆಳೆಯುತ್ತಿದ್ದಾರೆ. ಇದರೊಂದಿಗೆ ಉದ್ದು, ಅಲಸಂದೆ, ಸೋಯಾಬೀನ್‌ ಇತ್ಯಾದಿಗಳನ್ನು ಬೆಳೆಯುತ್ತಿದ್ದಾರೆ. ಇಂದಿಗೂ ಇವುಗಳ ಬೀಜವನ್ನು ಕೇಳಿದ ರೈತರಿಗೆ ಒದಗಿಸುತ್ತಿದ್ದಾರೆ. ಅವರ ಬಳಿ ಮೂರು ಹಸುಗಳಿವೆ. ಹತ್ತು ಗುಂಟೆ ಭೂಮಿಯಲ್ಲಿ ಇವುಗಳಿಗಾಗಿ ಮೇವನ್ನು ಬೆಳೆಯುತ್ತಿದ್ದಾಋಎ. ಪ್ರತಿವಾರ ಸುಮಾರು ೨೨೫ ಲೀಟರ್‌ನಷ್ಟು ಹಾಲನ್ನು ಮಾರಾಟ ಮಾಡುತ್ತಿದ್ದಾರೆ.

ಇದರೊಂದಿಗೆ ಹಿತ್ತಲಲ್ಲಿ ಗಿರಿರಾಜ ಕೋಳಿ ಮತ್ತು ದೇಸಿ ಕೋಳಿಗಳ ಸಾಕಾಣಿಕೆ ಮಾಡುತ್ತಿದ್ದಾರೆ. ಇವುಗಳಿಂದ ಮಾಸಿಕ ರೂ.೫,೦೦೦ ಗಳಿಸುತ್ತಿದ್ದಾರೆ.

ಪ್ರತಿ ಹೆಕ್ಟೇರಿಗೆ ೨೪ ಕ್ವಿಂಟಾಲ್‌ ಜೋಳವನ್ನು ಬೆಳೆಯುವ ಮೂಲಕ ತಾಲ್ಲೂಕಿನಲ್ಲಿ ಅತಿಹೆಚ್ಚು ಜೋಳ ಬೆಳೆದ ದಾಖಲೆಯನ್ನು ಮಾಡಿದ್ದಾರೆ. ಅದೇ ರೀತಿ ಒಂದು ಎಕರೆಗೆ ೩೮ ಕ್ವಿಂಟಾಲ್‌ ಭತ್ತ ಬೆಳೆದು ದಾಖಲೆ ನಿರ್ಮಿಸಿದ್ದಾರೆ.

ಶ್ರೀ ಮಲ್ಲಿಕಾರ್ಜುನ ಪಾಟೀಲರು ತಮ್ಮ ಶ್ರಮಕ್ಕೆ ಹಲವು ಪುರಸ್ಕಾರಗಳನ್ನು ಪಡೆದಿದ್ದಾರೆ. ೨೦೧೪-೧೫ರಲ್ಲಿ ತಾಲ್ಲೂಕು ಮಟ್ಟದಲ್ಲಿ ಅತ್ಯುತ್ತಮ ಕೃಷಿಕ ಪ್ರಶಸ್ತಿ ಪಡೆದಿದ್ದಾರೆ. ೨೦೧೭ರಲ್ಲಿ ಶ್ರೀ ಸಿದ್ಧರೂಢ ರಾಜ್ಯ ಪ್ರಶಸ್ತಿ ಪಡೆದವರಲ್ಲಿ ಇವರು ಕೂಡ ಸೇರಿದ್ದಾರೆ.

ಶ್ರೀ ಪಾಟೀಲರು ಕುಟುಂಬವು ಮಣ್ಣನ್ನು ನಂಬಿ ಹಾಳಾದವರಿಲ್ಲ ಎಂಬ ಬಗ್ಗೆ ಅಚಲವಿಶ್ವಾಸವನ್ನು ಹೊಂದಿದ್ದಾರೆ. ಕೃಷಿಯ ಬಗೆಗಿನ ಅವರ ಈ ನಂಬಿಕೆಗೆ ಸಾಕ್ಷಿಯಾಗಿ ಅವರ ಮಕ್ಕಳಿಬ್ಬರೂ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಶ್ರೀ ಪಾಟೀಲರು ತಮ್ಮೆಲ್ಲ ಯಶಸ್ಸಿನ ಶ್ರೇಯ ತಮ್ಮೊಂದಿಗೆ ಈ ಪಯಣದಲ್ಲಿ ಜೊತೆಯಾಗಿ ನಿಂತಿರುವ ತಮ್ಮ ಪತ್ನಿಗೆ ಸಲ್ಲಬೇಕೆಂದು ಹೇಳುತ್ತಾರೆ.

ಆಂಗ್ಲ ಮೂಲ : ಲೀಸಾ ಇಂಡಿಯಾ; ಸಂಪುಟ :೨೧; ಸಂಚಿಕೆ : ‌೩ ; ಸೆಪ್ಟಂಬರ್ ೨೦೧೯

Recent Posts

ಹಿತ್ತಲಿನ ಪೌಷ್ಟಿಕಾಂಶ ತೋಟಗಳು- ಕುಟುಂಬದ ಪೌಷ್ಟಿಕಾಂಶ ಮತ್ತು ಆದಾಯಕ್ಕಾಗಿ

ಹಿತ್ತಲಿನ ಪೌಷ್ಟಿಕಾಂಶ ತೋಟಗಳು- ಕುಟುಂಬದ ಪೌಷ್ಟಿಕಾಂಶ ಮತ್ತು ಆದಾಯಕ್ಕಾಗಿ

ಮಳೆಯಾಶ್ರಿತ ಕೃಷಿಯಲ್ಲಿ, ಹವಾಮಾನ ವೈಪರೀತ್ಯಗಳಿಂದ ಕೃಷಿ ಆಧಾರಿತ ಜೀವನೋಪಾಯವು ದುರ್ಬಲವಾಗಿದೆ. ಕೃಷಿ ಆಧಾರಿತ ಪರ್ಯಾಯ ಉದ್ಯಮಗಳು ರೈತರು ಕೃಷಿಯಲ್ಲಿ ಉಳಿಯಲು ಅಗತ್ಯವಾದ ಬೆಂಬಲವನ್ನು ಒದಗಿಸುತ್ತವೆ. ಹಿತ್ತಲಿನ ಅಡುಗೆಮನೆ ತೋಟವು ಮಹಿಳೆಯರ ಸಬಲೀಕರಣದ ಜೊತೆಗೆ ಆಹಾರ, ಆದಾಯ ಮತ್ತು ಪೌಷ್ಟಿಕಾಂಶ ಭದ್ರತೆಯಂತಹ ಹಲವು ಅಗತ್ಯಗಳನ್ನು ಪೂರೈಸುವ ಒಂದು ಉದ್ಯಮವಾಗಿದೆ.

ಮಹಿಳೆಯರ ನೇತೃತ್ವದ ಕೃಷಿ ಉದ್ಯಮಗಳು- ಸಿರಿಧಾನ್ಯಗಳ ಸಾಮರ್ಥ್ಯ ಪ್ರದರ್ಶನ

ಮಹಿಳೆಯರ ನೇತೃತ್ವದ ಕೃಷಿ ಉದ್ಯಮಗಳು- ಸಿರಿಧಾನ್ಯಗಳ ಸಾಮರ್ಥ್ಯ ಪ್ರದರ್ಶನ

ಒರಿಸ್ಸಾದಲ್ಲಿ ಸಿರಿಧಾನ್ಯಗಳ ಪುನರುಜ್ಜೀವನವು ಮಹಿಳಾ ಗುಂಪುಗಳಲ್ಲಿ ಆತ್ಮವಿಶ್ವಾಸವನ್ನು ತುಂಬಿದೆ. ಬಡತನ ಮತ್ತು ಅಪೌಷ್ಟಿಕತೆಯನ್ನು ಹೋಗಲಾಡಿಸಲು ಸಹಾಯ ಮಾಡಿದೆ. ಒರಿಸ್ಸಾ ಮಿಲ್ಲೆಟ್ಸ್ ಮಿಷನ್ ಮತ್ತು ಮಿಷನ್ ಶಕ್ತಿ ಇಲಾಖೆಗಳು ಒರಿಸ್ಸಾದಾದ್ಯಂತ WSHG ನೇತೃತ್ವದ ಸಿರಿಧಾನ್ಯ ಆಧಾರಿತ ಕೃಷಿ ಉದ್ಯಮಗಳನ್ನು ಯಶಸ್ವಿಯಾಗಿ ಉತ್ತೇಜಿಸುತ್ತಿವೆ. ಜೀವನೋಪಾಯವನ್ನು ಬಲಪಡಿಸುವುದರೊಂದಿಗೆ ಮನೆಯ ಆದಾಯವನ್ನು ಉತ್ತಮಗೊಳಿಸಿದೆ.

ಈಶಾನ್ಯ ಭಾರತದಲ್ಲಿ ಸಿರಿಧಾನ್ಯಗಳ ಪುನಶ್ಚೇತನ

ಈಶಾನ್ಯ ಭಾರತದಲ್ಲಿ ಸಿರಿಧಾನ್ಯಗಳ ಪುನಶ್ಚೇತನ

ಈಶಾನ್ಯ ಪ್ರದೇಶದ ಸಣ್ಣ ಹಿಡುವಳಿದಾರರು ತಮ್ಮ ಬೆಳೆ ಹಾಗೂ ಆಹಾರ ಪದ್ಧತಿಯಲ್ಲಿ ರಾಗಿಯನ್ನು ಪುನಶ್ಚೇತನಗೊಳಿಸಿದ್ದಾರೆ. ತಾಂತ್ರಿಕ ಮಾರ್ಗದರ್ಶನ ಮತ್ತು ಮೌಲ್ಯವರ್ಧನೆಯ ವಿಷಯದಲ್ಲಿ ಬೆಂಬಲ, ಮತ್ತು ಮಾರುಕಟ್ಟೆ ಸಂಪರ್ಕಗಳನ್ನು ಕಲ್ಪಿಸುವ ಮೂಲಕ ಈಶಾನ್ಯ ಭಾರತದ ಆಹಾರ ಮತ್ತು ಕೃಷಿ ವ್ಯವಸ್ಥೆಗಳಲ್ಲಿ ಸಿರಿಧಾನ್ಯಗಳನ್ನು ಮರಳಿ ತರುವಲ್ಲಿ ಪ್ರಮುಖ ಪಾತ್ರ ವಹಿಸಿದೆ.