ವಿಶ್ವ ಆಹಾರ ದಿನ 2025

ವಿಶ್ವ ಆಹಾರ ದಿನ 2025

ಆರೋಗ್ಯಕರ ಹಸಿವು ಮುಕ್ತ ಜಗತ್ತನ್ನು ನಿರ್ಮಿಸಲು ಸುಸ್ಥಿರ ಕೃಷಿ, ನ್ಯಾಯಯುತ ಆಹಾರ ವಿತರಣೆ ಮತ್ತು ಜವಾಬ್ದಾರಿಯುತ ಸೇವನೆಯ ಮೂಲಕ ಸಾಮೂಹಿಕ ಕ್ರಮಕ್ಕೆ ಇದು ಕರೆ ನೀಡುತ್ತದೆ. ಅಂದಾಜು 673 ಮಿಲಿಯನ್ ಜನರು ಹಸಿವಿನಿಂದ ಬದುಕುತ್ತಿದ್ದಾರೆ, ಇದು ಸಾಮೂಹಿಕ ಕ್ರಿಯೆಯ ತುರ್ತು ಅಗತ್ಯವನ್ನು ಎತ್ತಿ ತೋರಿಸುತ್ತದೆ.

ಬಸನಗೌಡರ ವೈವಿಧ್ಯಮಯ ಬೆಳೆಗಳ ತೋಟ

ಬಸನಗೌಡರ ವೈವಿಧ್ಯಮಯ ಬೆಳೆಗಳ ತೋಟ

ಹುಣಸೆ ಮರ ಮುಪ್ಪಾದರೂ, ಹುಳಿ ಮುಪ್ಪಲ್ಲ ಅನ್ನುವ ಗಾದೆ ಮಾತಿನಂತೆ ಗದಗ ತಾಲೂಕಿನ ಪಾಪನಾಶಿ ಗ್ರಾಮದ ಪ್ರಗತಿಪರ ರೈತರಾದ ಬಸನಗೌಡ ರಾಯನಗೌಡ ಪಾಟೀಲರು ತಮ್ಮ ೭೭ನೇ ವಯಸ್ಸಿನಲ್ಲೂ ಅಪರಿಮಿತ ಉತ್ಸಾಹದೊಂದಿಗೆ ಆರೋಗ್ಯಕರ ಜೀವನ ನಡೆಸುತ್ತಿದ್ದಾರೆ. ಬಿ.ಎ. ಪದವಿ ಕಲಿಯುವಾಗ ಒಕ್ಕಲುತನ ಮಾಡಿ ಭೂಮಿ ತಾಯಿಯ ಮಡಿಲಲ್ಲಿ ಸಂತೃಪ್ತಿಯ ಬದುಕು ಕಟ್ಟಿಕೊಳ್ಳಬೇಕು ಎಂದು ನಿರ್ಧರಿಸಿದರು. ನಂತರ ಬಿ.ಎ. ಪದವಿಯನ್ನು ಅರ್ದದಲ್ಲಿಯೇ ಕೈಬಿಟ್ಟು ಮಾದರಿ ಪ್ರಗತಿಪರ ರೈತನಾಗಬೇಕು ಎಂಬ ದೃಡಸಂಕಲ್ಪದಿಂದ ತಮ್ಮ ತಂದೆಯೊಂದಿಗೆ ವ್ಯವಸಾಯ ಪ್ರಾರಂಭಿಸಿದರು. ಒಕ್ಕಲುತನ  ಪ್ರಾರಂಭಿಸಿದಾಗ ಗೌಡರ ವಯಸ್ಸು ೨೧, ಸುಮಾರು ೫೫ ವರ್ಷಗಳಿಂದ ನಿರಂತರವಾಗಿ ವಿವಿಧ ಬಗೆಯ ಕೃಷಿ, ತೋಟಗಾರಿಕೆ, ಅರಣ್ಯ  ಬೆಳೆಗಳನ್ನು ಬೆಳೆಯುತ್ತಾ ಅವುಗಳ ಬಗ್ಗೆ ಅಪಾರ ಜ್ಞಾನವನ್ನು ಹೊಂದಿರುವರು. ಅವರ ಚಿಕ್ಕ ಮಗ ಪ್ರವೀಣಗೌಡ ಪಾಟೀಲ ತೋಟ ನಿರ್ವಹಣೆ ಮಾಡಲು ಸಹಾಯ ಮಾಡುವನು.

ಟರ್ಕಿ ಕೋಳಿ ಸಾಕಾಣಿಕೆ ಮಹಿಳೆಯರಿಗೆ ಪರ್ಯಾಯ ಜೀವನೋಪಾಯದ ಅವಕಾಶ

ಟರ್ಕಿ ಕೋಳಿ ಸಾಕಾಣಿಕೆ ಮಹಿಳೆಯರಿಗೆ ಪರ್ಯಾಯ ಜೀವನೋಪಾಯದ ಅವಕಾಶ

ದಕ್ಷಿಣ ಪರಗಣ ಜಿಲ್ಲೆಯ ಮಹಿಳೆಯರು ಟರ್ಕಿ ಕೋಳಿ ಸಾಕಾಣಿಕೆಯನ್ನು ಯಶಸ್ವಿಯಾಗಿ ಕೈಗೆತ್ತಿಕೊಂಡಿದ್ದಾರೆ. ಸ್ಥಳೀಯ ಕೆವಿಕೆಯ ಪ್ರಚುರಪಡಿಸಿದ ಈ ಮಾದರಿಯು ಅಭಿವೃದ್ಧಿಗಿದ್ದ ಅಡೆತಡೆಗಳನ್ನು ನಿವಾರಿಸಿ ಮಹಿಳಾ ಗುಂಪುಗಳ ಸಾಮರ್ಥ್ಯವನ್ನು ತೆರೆದಿಟ್ಟಿದೆ.

ಗ್ರಾಮೀಣ ಯುವಜನತೆ – ಭವಿಷ್ಯದ ರೈತರು

ಗ್ರಾಮೀಣ ಯುವಜನತೆ – ಭವಿಷ್ಯದ ರೈತರು

ಭಾರತದಲ್ಲಿ ಹೆಚ್ಚುತ್ತಿರುವ ಯುವ ಜನಸಂಖ್ಯೆಯು ದೇಶದ ನಿರ್ಮಾಣದಲ್ಲಿ ಬಳಸಬೇಕಾದ ಆಸ್ತಿಯಾಗಿದೆ. ಗ್ರಾಮೀಣ ಯುವಕರ ಅನುಕೂಲಕ್ಕಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ. ಗ್ರಾಮೀಣ ಯುವಜನರ ಆಕಾಂಕ್ಷೆಗಳು ಮತ್ತು ಕೃಷಿಯಲ್ಲಿ ಅವರನ್ನು ಉಳಿಸಿಕೊಳ್ಳಲು ಸಹಾಯ ಮಾಡುವ ಅಂಶಗಳನ್ನು ಅರ್ಥಮಾಡಿಕೊಳ್ಳಲು ಮಹಾರಾಷ್ಟ್ರದಲ್ಲಿ ಒಂದು ಅಧ್ಯಯನವನ್ನು ನಡೆಸಲಾಯಿತು. ಅಧ್ಯಯನದ ಸಂಶೋಧನೆಗಳು ಮತ್ತು ಒಳನೋಟಗಳು ಕೃಷಿಯಲ್ಲಿ ಗ್ರಾಮೀಣ ಯುವಕರನ್ನು ಉಳಿಸಿಕೊಳ್ಳುವಲ್ಲಿ ಸೂಕ್ತ ತಂತ್ರಗಳನ್ನು ಯೋಜಿಸಲು ಸಹಾಯ ಮಾಡುತ್ತದೆ.

ಕೃಷಿಯತ್ತ ಯುವಕರನ್ನು ಆಕರ್ಷಿಸುವುದು ಮತ್ತು ಉಳಿಸಿಕೊಳ್ಳುವುದು- (ARYA)

ಕೃಷಿಯತ್ತ ಯುವಕರನ್ನು ಆಕರ್ಷಿಸುವುದು ಮತ್ತು ಉಳಿಸಿಕೊಳ್ಳುವುದು- (ARYA)

ದೇಶದ ಕೃಷಿ ಅಭಿವೃದ್ಧಿಯಲ್ಲಿ ಗ್ರಾಮೀಣ ಯುವಕರ ಪ್ರಾಮುಖ್ಯತೆಯನ್ನು ಅರಿತ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR), ಗ್ರಾಮೀಣ ಯುವಕರ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಮತ್ತು ವಲಸೆಯನ್ನು ತಡೆಯಲು ARYA ಯೋಜನೆಯನ್ನು ಜಾರಿಗೆ ತಂದಿತು.

ಬೀಜ ಸಂರಕ್ಷಕರು ಮಹಿಳಾ ನೇತೃತ್ವದ ಕೃಷಿ ಉದ್ಯಮ

ಬೀಜ ಸಂರಕ್ಷಕರು ಮಹಿಳಾ ನೇತೃತ್ವದ ಕೃಷಿ ಉದ್ಯಮ

ಮಾರ್ಗದರ್ಶನ ಮತ್ತು ತರಬೇತಿ ನೆರವಿನೊಂದಿಗೆ ಮಹಾರಾಷ್ಟ್ರದ ಮಹಿಳಾ ಉದ್ಯಮಿಗಳು ಗುಣಮಟ್ಟದ ಸರಕು ಮತ್ತು ಸೇವೆಗಳನ್ನು ಒದಗಿಸುವ ವಿಶ್ವಾಸವನ್ನು ಬೆಳೆಸಿಕೊಂಡಿದ್ದಾರೆ. ಯಾರೂ ಗುರುತಿಸಿದ ಕೊಡುಗೆಯ ಮೂಲಕ ತಮ್ಮ ಮನೆಗಳು ಅಥವಾ ಹೊಲಗಳಿಗೆ ಸೀಮಿತವಾಗಿದ್ದ ಅವರೀಗ ಎಲ್ಲರಿಗೂ ಕಾಣುವಂತಹ ಯಶಸ್ವಿ ಉದ್ಯಮಿಗಳಾಗಿ ಹೊರಹೊಮ್ಮಿದ್ದು ದೊಡ್ಡ ಮಟ್ಟದ ಸಾಮಾಜಿಕ ಸ್ವೀಕಾರವನ್ನು ಪಡೆದಿದ್ದಾರೆ.

ಕೃಷಿ ಉದ್ಯಮಿಗಳಾಗುವ ಪಯಣದ ಹಾದಿಯಲ್ಲಿ ರೈತಮಹಿಳೆಯರ ಸವಾಲುಗಳು ಮತ್ತು ಮುಂದಿನ ದಾರಿ

ಕೃಷಿ ಉದ್ಯಮಿಗಳಾಗುವ ಪಯಣದ ಹಾದಿಯಲ್ಲಿ ರೈತಮಹಿಳೆಯರ ಸವಾಲುಗಳು ಮತ್ತು ಮುಂದಿನ ದಾರಿ

ಮಹಿಳಾ ನೇತೃತ್ವದ ಕೃಷಿ ಉದ್ಯಮಗಳನ್ನು ಉತ್ತೇಜಿಸುವುದು ಇನ್ನು ಮುಂದೆ ಆಯ್ಕೆಯಲ್ಲ, ಬದಲಿಗೆ ಸುಸ್ಥಿರ ಅಭಿವೃದ್ಧಿಯ ಅವಶ್ಯಕತೆಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ನಡೆಸುತ್ತಿರುವ ವ್ಯವಹಾರಗಳು ಮುಂದುವರೆಯುವಂತೆ ನೋಡಿಕೊಳ್ಳುವುದರಿಂದ ಕೃಷಿ ಕ್ಷೇತ್ರದಲ್ಲಿನ ಬಳಕೆಯಾಗದೆ ಉಳಿದ ಸಾಮರ್ಥ್ಯವು ಬಳಕೆಯಾಗುತ್ತದೆ. ಬಡತನವನ್ನು ಕಡಿಮೆ ಮಾಡುತ್ತದೆ, ಉದ್ಯೋಗ ಸೃಷ್ಟಿಸುತ್ತದೆ ಮತ್ತು ಲಿಂಗ ಸಮಾನತೆಯಿರುವ ಸಮಾಜವನ್ನು ನಿರ್ಮಿಸುತ್ತದೆ.

ಪ್ರಯೋಜನಕಾರಿ ಕೀಟಗಳ ಬಗ್ಗೆ ಪ್ರಚಾರ- ಪರಾಗಸ್ಪರ್ಶಕಗಳ ಸಂರಕ್ಷಣೆಯಲ್ಲಿ ಯುವಕರನ್ನು ತೊಡಗಿಸಿಕೊಳ್ಳುವುದು

ಪ್ರಯೋಜನಕಾರಿ ಕೀಟಗಳ ಬಗ್ಗೆ ಪ್ರಚಾರ- ಪರಾಗಸ್ಪರ್ಶಕಗಳ ಸಂರಕ್ಷಣೆಯಲ್ಲಿ ಯುವಕರನ್ನು ತೊಡಗಿಸಿಕೊಳ್ಳುವುದು

ಪರಾಗಸ್ಪರ್ಶಕಗಳ ಸಂಖ್ಯೆಯಲ್ಲಿನ ಕುಸಿತವು ಆತಂಕಕಾರಿಯಾಗಿದ್ದು ಪರಿಸರ ವ್ಯವಸ್ಥೆಯನ್ನು ನಾಶಪಡಿಸುತ್ತದೆ. ಇದು ಆಹಾರ ಭದ್ರತಾ ಬಿಕ್ಕಟ್ಟನ್ನು ಉಂಟುಮಾಡುತ್ತದೆ. ಪರಾಗಸ್ಪರ್ಶಕಗಳ ಸಂಖ್ಯೆಯಲ್ಲಿನ ಕುಸಿತವು ಆತಂಕಕಾರಿಯಾಗಿದ್ದು ಪರಿಸರ ವ್ಯವಸ್ಥೆಯನ್ನು ನಾಶಪಡಿಸುತ್ತದೆ. ಇದು ಆಹಾರ ಭದ್ರತಾ ಬಿಕ್ಕಟ್ಟನ್ನು ಉಂಟುಮಾಡುತ್ತದೆ. ಪರಾಗಸ್ಪರ್ಶಕ ಕೀಟಗಳ ಜನಸಂಖ್ಯೆಯನ್ನು ಹೆಚ್ಚಿಸಲು BAIF ನ ಆರಂಭಿಕ ಉಪಕ್ರಮಗಳು ಪರಾಗಸ್ಪರ್ಶ ಮತ್ತು ಬೆಳೆ ಉತ್ಪಾದನೆಯನ್ನು ಹೆಚ್ಚಿಸುವುದಲ್ಲದೆ, ಕೃಷಿ ಪರಿಸರ ಸಂರಕ್ಷಣೆಯ ಭವಿಷ್ಯದ ಸಂರಕ್ಷಕರಾಗಲು ಯುವಕರನ್ನು ಸಬಲೀಕರಣಗೊಳಿಸಿವೆ.

ಉಪಗ್ರಹ ಆಧಾರಿತ ನಿಖರ ಕೃಷಿ ಸಂಪ್ರದಾಯ ಮತ್ತು ತಂತ್ರಜ್ಞಾನದ ನಡುವಿನ ಸೇತುವೆ

ಉಪಗ್ರಹ ಆಧಾರಿತ ನಿಖರ ಕೃಷಿ ಸಂಪ್ರದಾಯ ಮತ್ತು ತಂತ್ರಜ್ಞಾನದ ನಡುವಿನ ಸೇತುವೆ

ಫಾರ್ಮೋನಾಟ್‌ನ ಉಪಗ್ರಹ ಆಧಾರಿತ ನಿಖರ ಕೃಷಿ ಕೇವಲ ತಂತ್ರಜ್ಞಾನದ ಬಗ್ಗೆ ಅಲ್ಲ – ಇದು ರೂಪಾಂತರದ ಬಗ್ಗೆ. ಅತ್ಯಾಧುನಿಕ ಪರಿಕರಗಳನ್ನು ರೈತರ ಕಾಲಾತೀತ ಸ್ಥಿತಿಸ್ಥಾಪಕತ್ವದೊಂದಿಗೆ ಸಂಯೋಜಿಸುವ ಮೂಲಕ, ಈ ವಿಧಾನವು ಕೃಷಿಯು ಹೆಚ್ಚು ಸುಸ್ಥಿರ, ಉತ್ಪಾದಕ ಮತ್ತು ಲಾಭದಾಯಕವಾಗಿರುವ ಭವಿಷ್ಯವನ್ನು ಸೃಷ್ಟಿಸುತ್ತಿದೆ.

YouTube
Instagram
WhatsApp